Monday, July 21, 2025

 


ಹಿರಿಯಡ್ಕ: ದಿನಾಂಕ 21-07-2025 ರಂದು ಕೆಪಿಎಸ್ ಹಿರಿಯಡ್ಕ ಇಲ್ಲಿ ಯಕ್ಷಶಿಕ್ಷಣ ವತಿಯಿಂದ ನಡೆಸಲ್ಪಡುವ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. 


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಯಕ್ಷಗಾನ ರಂಗದ ಉಪಾಧ್ಯಕ್ಷರಾದ ಶ್ರೀ ವಿ.ಜಿ ಹೆಗ್ಡೆ ಮಾತನಾಡಿ ಯಕ್ಷಗಾನ ವಿದ್ಯಾರ್ಥಿಗಳಲ್ಲಿ ಶಿಸ್ತಿನ ಜೀವನವನ್ನು ಕಲಿಸುತ್ತದೆ. ಅದರ ಜೊತೆಯಲ್ಲಿ ಏಕಾಗ್ರತೆಯನ್ನು ಮೂಡಿಸುತ್ತದೆ ಎಂದರು. ವಿದ್ಯಾರ್ಥಿಗಳಿಗೆ ಯಕ್ಷಗಾನವನ್ನು ಶೃದ್ಧೆಯಿಂದ ಕಲಿಯಬೇಕು ಅದರಿಂದ ತಮ್ಮ ಶೈಕ್ಷಣಿಕ ಫಲಿತಾಂಶ ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು . 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಯಕ್ಷಗಾನ ರಂಗದ ಸಹ ಕಾರ್ಯದರ್ಶಿ ಶ್ರೀ ನಾರಾಯಣ ಶೆಟ್ಟಿ ಮಾತನಾಡಿ ಯಕ್ಷಗಾನ ರಂಗವು ವಿದ್ಯಾ ಪೋಷಕ್ ಅಡಿಯಲ್ಲಿ ಪ್ರತಿ ವರ್ಷ ಒಂದು ಕೋಟಿಗೂ ಮೀರಿದ ವಿದ್ಯಾರ್ಥಿ ವೇತನ ವಿತರಣೆ ಮಾಡುತ್ತಿದೆ. ಅಲ್ಲದೆ ಆರ್ಥಿಕವಾಗಿ ತೀರಾ ಹಿಂದುಳಿದ ವಿದ್ಯಾರ್ಥಿಗಳ ಪೋಷಕರಿಗೆ ನೆರವಾಗಿ ಅನೇಕ ಮನೆಗಳ ನಿರ್ಮಾಣ ಮಾಡಿಕೊಟ್ಟದೆ ಎಂದರು. ಯಕ್ಷಗಾನ ಅಭ್ಯಾಸ ಮಾಡಿದ ವಿದ್ಯಾರ್ಥಿಗಳು ಜೀವನದಲ್ಲಿ ವಿನಯವಂತರಾಗಿ ಪರಸ್ಪರ ಗೌರವ ಕೊಡುವ ಗುಣ ಹೊಂದುತ್ತಾರೆ. ಆದ್ದರಿಂದ ಯುಕ್ಷಗಾನ ತರಬೇತಿಯಲ್ಲಿ ಸೇರಿರುವ ವಿದ್ಯಾರ್ಥಿಗಳು ಶೃದ್ಧೆಯಿಂದ ತರಬೇತಿಯಲ್ಲಿ ಪಾಲ್ಗೊಳ್ಳಿ ಎಂದು ಕಿವಿಮಾತು ಹೇಳಿದರು. 

ವೇದಿಕೆಯಲ್ಲಿ ಹಳೆ ವಿದ್ಯಾರ್ಥಿ ಸಂಘ ಕೆಪಿಎಸ್ ಹಿರಿಯಡ್ಕ ಇದರ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ರಾವ್ , ಯಕ್ಷಗಾನ ತರಬೇತಿಯ ಗುರುಗಳಾದ ಶ್ರೀ ಸ್ಕಂದ, ತರಬೇತಿಯ ಸಂಯೋಜಕರಾದ ಡಾ. ರವೀಂದ್ರ ಕುಮಾರ್ ಉಪಸ್ಥಿತರಿದ್ದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ವಹಿಸಿದ್ದರು. ಪ್ರೌಢಶಾಲಾ ವಿಭಾಗದ ಮುಖ್ಯಸ್ಥರಾದ ಶ್ರೀ ಪ್ರಕಾಶ್ ಪ್ರಭು ಸ್ವಾಗತಿಸಿದರು. ಚಿತ್ರಕಲಾ ಶಿಕ್ಷಕರಾದ ಶ್ರೀ ಮೋಹನ್ ಕಡಬ ವಂದಿಸಿದರು. ಅಧ್ಯಾಪಕರಾದ ಶ್ರೀ ರವೀಂದ್ರ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. 



No comments:

Post a Comment

SSLC TIME TABLE _ 2023

TOPPER IN PUC EXAM RESULT

           KARNATAKA PUBLIC SCHOOL HIRIADKA                      🌟Congratulations🌟 ಉಡುಪಿ: ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಇತ್ತೀಚೆಗೆ ಪ್ರಕಟಿಸಿ...